Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:36 - ಕನ್ನಡ ಸತ್ಯವೇದವು J.V. (BSI)

36 ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಲೊಕಾಂಚ್ಯಾ ತಾಂಡ್ಯಾಕ್ನಿ ಬಗುನ್, ಜೆಜುಕ್ ತೆಂಚೊ ಪಾಪ್ ದಿಸ್ಲೊ. ಕಶ್ಯಾಕ್ ಮಟ್ಲ್ಯಾರ್, ತಿ ಲೊಕಾ ಬೆಜಾರಾನ್ ಅನಿ ಕಾಯ್ಬಿ ಅದಾರ್ ‍ನಸ್ತಾನಾ ರಾಕ್ವಾಲಿನಸಲ್ಲ್ಯಾ ಬಕ್ರ್ಯಾಂಚ್ಯಾ ಸರ್ಕೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:36
18 ತಿಳಿವುಗಳ ಹೋಲಿಕೆ  

ಆದದರಿಂದ ಅವರ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನಾಯಕನಾಗಿ ಅವರ ಮುಂದೆ ಹೊರಡುವದಕ್ಕೂ ಅವರನ್ನು ಹಿಂದಕ್ಕೆ ಕರಕೊಂಡು ಬರುವದಕ್ಕೂ ಒಬ್ಬ ಪುರುಷನನ್ನು ನೇವಿುಸಬೇಕೆಂದು ಬೇಡಿದನು.


ಆತನು ಹೊರಗೆ ಬಂದು ಬಹುಜನರ ಗುಂಪನ್ನು ಕಂಡು ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಬಹಳ ಉಪದೇಶ ಮಾಡುತ್ತಿದ್ದನು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಆತನು ಹೊರಗೆ ಬಂದು ಬಹು ಜನರ ಗುಂಪನ್ನು ಕಂಡು ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಆಗ ಯೇಸು ತನ್ನ ಶಿಷ್ಯರನ್ನು ಹತ್ತರಕ್ಕೆ ಕರೆದು ಅವರಿಗೆ - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಅವರು ನನ್ನ ಬಳಿಗೆ ಬಂದು ಈಗ ಮೂರು ದಿನವಾಯಿತು; ಅವರಿಗೆ ಊಟಕ್ಕೆ ಏನೂ ಇಲ್ಲ; ಅವರನ್ನು ಉಪವಾಸವಾಗಿ ಕಳುಹಿಸಿಬಿಡುವದಕ್ಕೆ ನನಗೆ ಮನಸ್ಸಿಲ್ಲ; ದಾರಿಯಲ್ಲಿ ಬಳಲಿಹೋದಾರು ಎಂದು ಹೇಳಿದನು.


ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.


ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.


ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೆ ಹೋಗಿರಿ.


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.


ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡದ ಕುರಿಗಳ ಹಾಗೂ ಪ್ರತಿಯೊಬ್ಬನು ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಇವರು ನನ್ನ ಬಳಿಗೆ ಬಂದು ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು