Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:37 - ಕನ್ನಡ ಸತ್ಯವೇದವು J.V. (BSI)

37 ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತಸೆಮನುನ್, ತೆನಿ ಅಪ್ನಾಚ್ಯಾ ಶಿಸಾಕ್ನಿ, ಪಾಜೆ ತವ್ಡೆ ಪಿಕ್ಕ್ ಯೆಲಾ, ಖರೆ ಕಾಮ್ ಕರ್‍ತಲಿ ಲೊಕಾ ಲೈ ಕಮಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:37
17 ತಿಳಿವುಗಳ ಹೋಲಿಕೆ  

ತಾನು ಹೋಗಬೇಕೆಂದಿದ್ದ ಪ್ರತಿಯೊಂದೂರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಕರ್ತನು ನುಡಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀ ಸಮೂಹವು ಎಷ್ಟೋ ದೊಡ್ಡದು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ಯೂಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಾಭಿವೃದ್ಧಿಗಾಗಿ ನನ್ನ ಜೊತೆಗೆಲಸದವರಾಗಿದ್ದಾರೆ; ಇವರಿಂದ ನನಗೆ ಉಪಶಮನ ಉಂಟಾಯಿತು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡು ಮಾಡುವದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ ಎಂದು ಹೇಳಿದನು.


ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.


ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು