Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:7 - ಕನ್ನಡ ಸತ್ಯವೇದವು J.V. (BSI)

7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:7
14 ತಿಳಿವುಗಳ ಹೋಲಿಕೆ  

ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;


ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.


ಅದು ಕುಂಟಾಗಿ ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಕೂಡದು; ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.


ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.


ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು