Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:11 - ಕನ್ನಡ ಸತ್ಯವೇದವು J.V. (BSI)

11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:11
27 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಅವರು ಪ್ರಾಪಂಚಿಕರಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅಕೃತ್ಯಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನವನ್ನು ಭಂಗಪಡಿಸಿದ್ದಾನೆ.


ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.


ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ನಮಗೆ ಪರಿಹಾರವಾಯಿತು ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡಿಸುವದಕ್ಕೆ ಅವಕಾಶ ಮಾಡಿಕೊಳ್ಳುವಿರೋ?


ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.


ಅವರು ತಮ್ಮನ್ನು ಬಾಳ್‍ಪೆಗೋರನ ಸೇವೆಗೆ ಒಪ್ಪಿಸಿ ಜಡಮೂರ್ತಿಗಳಿಗೆ ಅರ್ಪಿಸಿದ್ದನ್ನು ಊಟಮಾಡಿದರು.


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ - ಇಸ್ರಾಯೇಲ್ಯರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ [ನಮ್ಮನ್ನು ನಾವು ತಿದ್ದಿಕೊಳ್ಳುವ] ನಿರೀಕ್ಷೆಯು ಇನ್ನೂ ಉಂಟು.


ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಸೇವಿಸಿದರು.


ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.


ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದದರಿಂದ ನೀವು ನನಗೆ ಮೀಸಲಾಗಿರಬೇಕು.


ಯೆಹೋವನು ಇಸ್ರಾಯೇಲನ್ನು ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು