Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:13 - ಕನ್ನಡ ಸತ್ಯವೇದವು J.V. (BSI)

13 ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:13
15 ತಿಳಿವುಗಳ ಹೋಲಿಕೆ  

ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.


ತರುವಾಯ ಸಾಧಾರಣಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗುಣುಗುಟ್ಟತೊಡಗಿದರು.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು