Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:14 - ಕನ್ನಡ ಸತ್ಯವೇದವು J.V. (BSI)

14 ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:14
22 ತಿಳಿವುಗಳ ಹೋಲಿಕೆ  

ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.


ನೀನು ಬಿಡಲ್ಪಟ್ಟು ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ ಎಂಬದು ನಿನ್ನ ದೇವರ ನುಡಿ.


ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.


ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳಷ್ಟೆ.


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಜಾರಳ ನಡತೆಯು ಹೀಗೆಯೇ ಸರಿ; ಅವಳು ತಿಂದು ಬಾಯಿ ಒರಿಸಿಕೊಂಡು ನಾನು ತಪ್ಪುಮಾಡಲಿಲ್ಲವಲ್ಲವೆ, ಅಂದುಕೊಳ್ಳುವಳು.


ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.


ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.


ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.


ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.


ಅವರು ಅವನಿಗೆ - ಹಾಗೆಯೇ ಮಾಡುವೆವು; ಉಭಯತರ ಮಾತುಗಳಿಗೆ ಯೆಹೋವನೇ ಸಾಕ್ಷಿ ಎಂದು ಉತ್ತರಕೊಟ್ಟರು.


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವದೇಕೆ?


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು