ಮಲಾಕಿ 2:2 - ಕನ್ನಡ ಸತ್ಯವೇದವು J.V. (BSI)2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.