Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:4 - ಕನ್ನಡ ಸತ್ಯವೇದವು J.V. (BSI)

4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿ ಕಳುಹಿಸಿದ್ದೇನೆಂಬದು ನಿಮಗೆ ಗೊತ್ತಾಗುವದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:4
21 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು ಎಂದು ಹೇಳಿದನು.


ನಿಮ್ಮ ಊರಿಂದ ನಮ್ಮ ಕಾಲುಗಳಿಗೆ ಹತ್ತಿದ ಧೂಳನ್ನೂ ಒರಸಿಬಿಡುತ್ತೇವೆ; ಅದು ನಿಮಗೇ ಇರಲಿ; ಆದಾಗ್ಯೂ ದೇವರ ರಾಜ್ಯವು ಸಮೀಪಕ್ಕೆ ಬಂದದೆ ಎಂದು ನಿಮಗೆ ತಿಳಿದಿರಲಿ ಎಂಬದಾಗಿ ಹೇಳಿರಿ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.


ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರ ಕೊಟ್ಟನು.


ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.


ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನು ಯೆಹೋವನು.


ಯೆಹೋವನು ಮೋಶೆಗೆ - ನಾನು ಇಸ್ರಾಯೇಲ್ಯರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನೇ ತೆಗೆದುಕೊಂಡಿದ್ದೇನೆಂದು ತಿಳಿದುಕೊ. ಆದದರಿಂದ ಲೇವಿಯರು ನನ್ನ ಸ್ವಕೀಯವಾದ ಸೊತ್ತು.


ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು;


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು