Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:7 - ಕನ್ನಡ ಸತ್ಯವೇದವು J.V. (BSI)

7 ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:7
37 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.


ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.


ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.


ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನ ದೂತನಾದ ಹಗ್ಗಾಯನು ಇದನ್ನು ನೋಡಿ ಜನರಿಗೆ - ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಾನೆ ಎಂಬದನ್ನು ಯೆಹೋವನ ದೂತನಾಗಿಯೇ ಹೇಳಿದನು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧಕರು ಯಾರು?


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.


ಯಾಜಕನಾದ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ನೀನು ಹರಸಿಕೊಂಡು ತೀರಿಸದೆ ಇರುವದಕ್ಕಿಂತ ಹರಕೆ ಮಾಡಿಕೊಳ್ಳದೆ ಇರುವದು ವಾಸಿ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು