Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:13 - ಕನ್ನಡ ಸತ್ಯವೇದವು J.V. (BSI)

13 ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜು ಚಾಳಿಸ್ ದಿಸಾ, ತ್ಯಾ ಮರುಭುಮಿತ್ ಜಿವಾಕ್ ಅಪಾಯ್ ಕರ್‍ತಲ್ಯಾ ಜನಾವರಾಂಚ್ಯಾ ಮದ್ದಿ ರ್‍ಹಾಲೊ, ಥೈ ಸೈತಾನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಕಸ್ರತ್ ಕರ್‍ತಾ. ಖರೆ, ಸೈತಾನಾಕ್ ಜೆಜುನ್ ಪಾಪ್ ಕರಿ ಸರ್ಕೆ ಕರುಕ್ ಹೊವುಕ್ನಾ. ಮಾನಾ ದೆವಾಚ್ಯಾದುತಾನಿ ಯೆವ್ನ್ ಜೆಜುಚಿ ಸೆವಾ ಚಾಕ್ರಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:13
13 ತಿಳಿವುಗಳ ಹೋಲಿಕೆ  

ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಆ ನಾಲ್ವತ್ತು ದಿನಗಳು ಕಳೆದ ಮೇಲೆ ಯೇಹೋವನು ತನ್ನ ನಿಬಂಧನೆಯಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು ನೀನು ಬೇಗ ಇಲ್ಲಿಂದ ಇಳಿದುಹೋಗು;


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು.


ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು