Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:27 - ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಸಗ್ಳಿ ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ " ಹೆ ಕಾಯ್? ಹ್ಯೊ ಮಾನುಸ್ ಅದಿಕಾರ್‍ಯಾನ್ ಭರಲ್ಲ್ಯಾ ನ್ಹವ್ಯಾಚ್ ರಿತಿನ್ ಶಿಕ್ವುತಾ! ಅನಿ ಗಿರೆ ಸೈತ್, ತೆನಿ ಸಾಂಗಟಲ್ಲೆ ಸಗ್ಳೆ ಆಯಿಕ್ತ್ಯಾತ್. ಮನುನ್ ಎಕಾಮೆಕಾಕ್ನಿ ಬೊಲುಕ್‍ಲಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:27
15 ತಿಳಿವುಗಳ ಹೋಲಿಕೆ  

ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು


ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು.


ಮೂಕರಾಗಿದ್ದವರು ಮಾತಾಡಿದ್ದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ ಕುಂಟರಿಗೆ ಕಾಲುಬಂದದ್ದನ್ನೂ ಕುರುಡರಿಗೆ ಕಣ್ಣು ಬಂದದ್ದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ ಜನರ ದೇವರನ್ನು ಕೊಂಡಾಡಿದರು.


ಆತನು ದೆವ್ವಬಿಡಿಸಿದ ಮೇಲೆ ಆ ಮೂಕನು ಮಾತಾಡುವವನಾದನು. ಅದಕ್ಕೆ ಆ ಜನರು - ಇಸ್ರಾಯೇಲ್ ಜನರಲ್ಲಿ ಇಂಥ ಕಾರ್ಯವನ್ನು ಇದುವರೆಗೆ ಯಾರೂ ನೋಡಲಿಲ್ಲವೆಂದು ಬೆರಗಾದರು.


ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಅವರು ಯೆರೂಸಲೇವಿುನ ದಾರಿಯನ್ನು ಹಿಡಿದು ಹೋಗುತ್ತಿರುವಾಗ ಯೇಸು ಅವರ ಮುಂದೆ ಮುಂದೆ ಹೋಗುತ್ತಿದ್ದನು. ಅವರು [ನೋಡಿ] ಬೆರಗಾದರು; ಆತನ ಹಿಂದೆ ಬರುವವರು ಭಯಪಡುವವರಾದರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತಿರಿಗಿ ಕರೆದುಕೊಂಡು ಮುಂದೆ ತನಗಾಗುವದನ್ನು ಹೇಳುವದಕ್ಕೆ ತೊಡಗಿ ಅವರಿಗೆ -


ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.


ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಎಲ್ಲೆಲ್ಲಿಯೂ ಹಬ್ಬಿತು.


ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.


ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.


ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ - ನೀನು ಹೇಳುವ ಈ ನೂತನತರವಾದ ಉಪದೇಶವನ್ನು ನಾವು ತಿಳಿಯಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು