Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:48 - ಕನ್ನಡ ಸತ್ಯವೇದವು J.V. (BSI)

48 ಅನೇಕರು - ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅನೇಕ ಜನರು ಆ ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ಲೊಕಾ ತೆಕಾ “ಗಪ್ ರ್‍ಹಾ” ಮನುನ್ ಜೊರ್ ಕರುಕ್ ಲಾಗ್ಲ್ಯಾರ್ಬಿ ತೊ “ದಾವಿದಾಚ್ಯಾ ಲೆಕಾ ಮಾಜಿ ದಯಾ ಕರ್!” ಮನುನ್ ಅನಿಬಿ ಜೊರಾನ್ ಬೊಬ್ ಮಾರುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:48
15 ತಿಳಿವುಗಳ ಹೋಲಿಕೆ  

ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.


ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು - ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವದು? ಅಂದರು.


ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.


ಆಗ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ತಂದು ಆತನು ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಲು ಶಿಷ್ಯರು ಅವರನ್ನು ಗದರಿಸಿದರು.


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.


ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು