Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:3 - ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ನಿಮ್ಮನ್ನು - ಏನು ಹೀಗೆ ಮಾಡುವದು ಎಂದು ಕೇಳಿದರೆ - ಇದು ಸ್ವಾವಿುಯವರಿಗೆ ಬೇಕಾಗಿದೆ, ಅವರು ತಡಮಾಡದೆ ತಿರಿಗಿ ಇಲ್ಲಿಗೆ ಕಳುಹಿಸಿಕೊಡುವರು ಅನ್ನಿರಿ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’ ” ಎಂದು ಹೇಳಿರಿ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕೊನ್ ತರ್ ಗಾಡ್ವಾಕ್ ಕಶ್ಯಾಕ್ ಘೆವ್ನ್ ಜಾವ್ಕ್ ಲ್ಯಾಸಿ ಮನುನ್ ಇಚಾರ್ಲ್ಯಾರ್ ಧನಿಯಾಕ್ ತೆಚಿ ಗರಜ್ ಹಾಯ್ ಅನಿ ಲಗ್ಗುನಾಚ್ ತೊ ತೆಕಾ ಫಾಟಿ ಧಾಡುನ್ ದಿತಾ ಮನುನ್ ಸಾಂಗಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:3
11 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.


ಅವನು ತಕ್ಕ ಸಾಮಾನೆಲ್ಲಾ ಸಿದ್ಧವಾಗಿ ಇಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಕ್ಕೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.


ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಒಂದು ಕತ್ತೇಮರಿ ಕಟ್ಟಿರುವದನ್ನು ಕಂಡು ಅದನ್ನು ಬಿಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು