Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:11 - ಕನ್ನಡ ಸತ್ಯವೇದವು J.V. (BSI)

11 ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾರ್ ವೊಡುನ್ ಹಾನುನ್ ಇಚಾರ್‍ನಿ ಕರ್‍ತಾನಾ, ತುಮಿ ತೆಂಕಾ ಕಾಯ್ ಸಾಂಗುಚೆ, ಕಾಯ್ ಬೊಲುಚೆ ಮನುನ್ ಚಿಂತಾ ಕರುನಕಾಸಿ, ಕಾಯ್ ಬೊಲುಚೆ ಮನುನ್ ತುಮ್ಕಾ ದಿಸ್ತಾ ತೆ ಬೊಲಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ತುಮಿ ಬೊಲಿನ್ಯಾಸಿ ಪವಿತ್ರ್ ಆತ್ಮೊ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:11
25 ತಿಳಿವುಗಳ ಹೋಲಿಕೆ  

ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಇವುಗಳನ್ನು ಮಾನುಷಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ದೇವರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಸಂಬಂಧವಾದವುಗಳನ್ನು ಆತ್ಮನಿಗೆ ಯುಕ್ತವಾದ ರೀತಿಯಲ್ಲಿ ವಿವರಿಸುತ್ತೇವೆ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಯೋಹಾನನು - ಪರಲೋಕದಿಂದ ಅನುಗ್ರಹಿಸೋಣವಾದದ್ದನ್ನೇ ಹೊರತು ಮನುಷ್ಯನು ಹೆಚ್ಚೇನು ಹೊಂದಲಾರನು.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು -


ಆಗ ಹಿರೀಸಭೆಯಲ್ಲಿ ಕೂತಿದ್ದವರೆಲ್ಲರು ಅವನನ್ನು ದೃಷ್ಟಿಸಿ ನೋಡಿ ಅವನ ಮುಖವು ದೇವದೂತನ ಮುಖದಂತೆ ಇರುವದನ್ನು ಕಂಡರು.


ಇದಲ್ಲದೆ ಅಣ್ಣನು ತಮ್ಮನನ್ನು ತಂದೆಯು ಮಗನನ್ನು ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು