Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:27 - ಕನ್ನಡ ಸತ್ಯವೇದವು J.V. (BSI)

27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ತಾನು ಆದುಕೊಂಡವರನ್ನು ಭೂವಿುಯ ಕಟ್ಟ ಕಡೆಯಿಂದ ಆಕಾಶದ ಕಟ್ಟ ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಿ ಯೆಚುನ್ ಘೆಟಲ್ಲ್ಯಾ ಲೊಕಾಕ್ನಿ ದುನಿಯಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಅನಿ ಸರ್‍ಗಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಗೊಳಾ ಕರುಕ್ ಲಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:27
27 ತಿಳಿವುಗಳ ಹೋಲಿಕೆ  

ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ನಿಮ್ಮಲ್ಲಿ ಯಾರಾದರೂ ಭೂಲೋಕದ ಕೊನೆಯವರೆಗೂ ಒಯ್ಯಲ್ಪಟ್ಟರೂ ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರತಂದು


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ -


ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು.


ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿ ಕಲಿಯಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು