Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:8 - ಕನ್ನಡ ಸತ್ಯವೇದವು J.V. (BSI)

8 ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಭೂಕಂಪಗಳು ಅಲ್ಲಲ್ಲಿ ಆಗುವವು; ಬರಗಳು ಬರುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕ್ ದೆಸ್ ಅನಿ ಎಕ್ ದೆಸಾವರ್ತಿ ಅನಿ ಎಕ್ ರಾಜ್ ಅನಿ ಎಕ್ ರಾಜಾಚ್ಯಾ ವರ್‍ತಿ ಮಾರಾ-ಮಾರಿ ಕರುಕ್ ಉಟ್ತ್ಯಾತ್. ತಸೆಚ್ ಸಗ್ಳ್ಯಾಕ್ಡೆ ಭುಕಂಪಾ ಹೊತ್ಯಾತ್ ಅನಿ ಬರಗಾಲ್ ಪಡ್ತಾ; ಹೆ ಸಗ್ಳೆ ಎಕಾ ಬಾಯ್ಕೊಮನ್ಸಿಕ್ ಬಾನತ್ಪಾನಾಚೊ ತರಾಸ್ ಯೆಲ್ಯಾ ಬಾಸೆನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:8
21 ತಿಳಿವುಗಳ ಹೋಲಿಕೆ  

ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.


ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.


ಕಂಪನವೂ ಹೆರುವವಳಂತೆ ವೇದನೆಯೂ ಅವರಿಗುಂಟಾಯಿತು.


ಆಗ ಮತ್ತೊಂದು ಕುದುರೆಯು ಹೊರಟು ಬಂತು; ಅದು ಕೆಂಪು ಕುದುರೆ. ಅದರ ಮೇಲೆ ಕೂತಿದ್ದವನಿಗೆ ಭೂವಿುಯಿಂದ ಸಮಾಧಾನವನ್ನು ತೆಗೆದುಬಿಡುವದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗುವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಅವನಿಗೆ ದೊಡ್ಡ ಕತ್ತಿಯು ಕೊಡಲ್ಪಟ್ಟಿತು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನಾವ್ಯಥೆಗಳಿಗೆ ಒಳಗಾಗಿದೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು. ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.


ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.


ಚೀಯೋನ್ ನಗರಿಯು ಬೇನೆ ತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವದನ್ನು ನಾನು ಕೇಳಿದ್ದೇನೆ; ಏದುತ್ತಾ ಕೈಚಾಚಿ - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಆತ್ಮವು ಉಡುಗುತ್ತದೆ ಎಂದು ಬಡುಕೊಳ್ಳುತ್ತಾಳೆ.


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವದು ಅಗತ್ಯ; ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು