Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:11 - ಕನ್ನಡ ಸತ್ಯವೇದವು J.V. (BSI)

11 ಅವರು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆ ಎಂದು ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ಸಾಂಗಟಲ್ಲೆ ಆಯ್ಕುನ್, ತೆನಿ ಲೈ ಕುಶಿ ಹೊಲೆ ಅನಿ ತುಕಾ ಪೈಸೆ ದಿತಾಂವ್ ಮನುನ್ ಸಾಂಗ್ಲ್ಯಾನಿ, ತಸೆ ಮನುನ್ ಜೆಜುಕ್ ಧರುನ್ ದಿತಲೊ ಬರೊ ಅವ್ಕಾಸ್ ತೊ ಹುಡ್ಕುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:11
14 ತಿಳಿವುಗಳ ಹೋಲಿಕೆ  

ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ನಾನು ಅವನನ್ನು ನಿಮಗೆ ಹಿಡುಕೊಟ್ಟರೆ ನನಗೆ ಏನು ಕೊಡುತ್ತೀರಿ? ಅಂದನು. ಅವರು ಅವನಿಗೆ ಮೂವತ್ತು ರೂಪಾಯಿ ತೂಗಿ ಕೊಟ್ಟರು.


ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ,


ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬವನು ಮಹಾಯಾಜಕರ ಬಳಿಗೆ ಹೋಗಿ -


ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮಹಾಯಾಜಕರಿಗೆ ಹಿಡುಕೊಡಬೇಕೆಂತ ಅವರ ಬಳಿಗೆ ಹೋದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ, ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿವಸ, ಆತನ ಶಿಷ್ಯರು - ನೀನು ಪಸ್ಕದ ಊಟ ಮಾಡುವಂತೆ ನಾವು ಎಲ್ಲಿ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು


ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರ ಲೆಕ್ಕದಲ್ಲಿ ಸೇರಿದವನಾದ ಇಸ್ಕರಿಯೋತೆಂಬ ಯೂದನಲ್ಲಿ ಪ್ರವೇಶಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು