Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:13 - ಕನ್ನಡ ಸತ್ಯವೇದವು J.V. (BSI)

13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು; ನೀವು ಅವನ ಹಿಂದೆ ಹೋಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸು ಅವರಲ್ಲಿ ಇಬ್ಬರಿಗೆ, “ನೀವು ಪಟ್ಟಣಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತವನೊಬ್ಬನು ನಿಮ್ಮನ್ನು ಎದುರುಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಜೆಜುನ್ ಅಪ್ನಾಚ್ಯಾ ದೊಗ್ಯಾ ಜಾನಾ ಶಿಸಾಕ್ನಿ ಬಲ್ವುನ್ “ತುಮಿ ಗಾಂವಾತ್ ಜಾಂವಾ, ಥೈ ಎಕ್ ಪಾನಿಯಾಚೊ ಬಿಂದ್ಗೊ ಖಾಂಜಾರ್ ಘೆವ್ನ್ ಯೆತಲೊ ಎಕ್ ಮಾನುಸ್ ಗಾವ್ತಾ, ತೆಚ್ಯಾ ಫಾಟ್ನಾಚ್ ಜಾಂವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:13
11 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ, ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿವಸ, ಆತನ ಶಿಷ್ಯರು - ನೀನು ಪಸ್ಕದ ಊಟ ಮಾಡುವಂತೆ ನಾವು ಎಲ್ಲಿ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು


ಅವನು ಯಾವ ಮನೆಗೆ ಹೋಗುವನೋ ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ತನಗೆ ಭೋಜನಶಾಲೆ ಎಲ್ಲಿ ಎಂದು ಕೇಳುತ್ತಾನೆ ಎಂಬದಾಗಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು