Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:5 - ಕನ್ನಡ ಸತ್ಯವೇದವು J.V. (BSI)

5 ಇದನ್ನು ಮುನ್ನೂರು ಹಣಕ್ಕಿಂತ ಹೆಚ್ಚು ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಎಂದು ಹೇಳಿ ಆಕೆಗೆ ಛೀ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಹೆ ತೆಲ್ ತಿನ್ ಸೆಂಬರ್ ಚಾಂದಿಚ್ಯಾ ಪೈಸ್ಯಾಕ್ನಿ ಇಕುನ್ ಯೆಲ್ಲೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ನಸಿತ್ತೆ ಕಾಯ್?” ಮನುನ್ ತ್ಯಾ ಬಾಯ್ಕೊಮನ್ಸಿಕ್ ಜೊರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:5
17 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು.


ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶವಾದರು; ನೀವು ಗುಣುಗುಟ್ಟಬೇಡಿರಿ.


ಅದಕ್ಕೆ ಯೇಸು ಅವರಿಗೆ - ನಿಮ್ಮ ನಿಮ್ಮೊಳಗೆ ಗುಣುಗುಟ್ಟಬೇಡಿರಿ.


ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು.


ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.


ಅದನ್ನು ತೆಗೆದುಕೊಂಡು ಮನೆಯ ಯಜಮಾನನ ಮೇಲೆ ಗುಣುಗುಟ್ಟಿ -


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.


ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು - ಈ ತೈಲವನ್ನು ನಷ್ಟಮಾಡಿದ್ದೇಕೆ?


ಆದರೆ ಯೇಸು - ಈಕೆಯನ್ನು ಬಿಡಿರಿ. ಈಕೆಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.


ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು