Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:1 - ಕನ್ನಡ ಸತ್ಯವೇದವು J.V. (BSI)

1 ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾಬ್ಬಾತ್ ಸರುನ್ ಗೆಲ್ಲ್ಯಾ ತನ್ನಾ, ಮರಿ ಮಾಗ್ದೆಲಿನ್, ಜಾಕೊಬಾಚಿ ಬಾಯ್ ಮರಿ ಅನಿ ಸಲೊಮಿ ಜೆಜುಚ್ಯಾ ಮಡ್ಯಾಕ್ ಲಾವುಕ್ ಮನುನ್ ಮ್ಹಾಗ್ಲೆ ಸುಗಂದ್ ತೆಲ್ ಇಕಾತ್ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:1
19 ತಿಳಿವುಗಳ ಹೋಲಿಕೆ  

ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.


ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು.


ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.


ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ತಂಗಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.


ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ.


ಮಗ್ದಲದ ಮರಿಯಳೂ ಯೋಸೆಯ ತಾಯಿ ಮರಿಯಳೂ ಆತನನ್ನಿಡುವ ಸ್ಥಳವನ್ನು ನೋಡಿದರು.


ಈಕೆಯು ತನ್ನ ಕೈಲಾಗುವಷ್ಟು ಮಾಡಿದ್ದಾಳೆ; ಈಕೆಯು ಮುಂದಾಗಿ ನನ್ನ ಉತ್ತರಕ್ರಿಯೆಗೋಸ್ಕರ ನನ್ನ ದೇಹಕ್ಕೆ ಈ ತೈಲವನ್ನು ಹಚ್ಚಿದ್ದಾಳೆ.


ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಬುಕ್ಕಿಟ್ಟುಗಾರರ ಕಸಬಿನ ಮೇರೆಗೆ ವಿುಶ್ರಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು ಅವನು ತನಗೋಸ್ಕರ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಅವನಿಗೋಸ್ಕರ ಬಹುಧೂಪವನ್ನು ಸುಟ್ಟರು.


ಆ ದಿನವು ಸೌರಣೆಯ ದಿನವಾಗಿತ್ತು; ಮತ್ತು ಸಬ್ಬತ್‍ದಿನ ಪ್ರಾರಂಭವಾಗುವದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.


ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ಸೌರಣೆಯ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನ ಆಗಿತ್ತು.


ತರುವಾಯ ಅವನು ತನ್ನ ಸೇವಕರಾದ ವೈದ್ಯರಿಗೆ - ನನ್ನ ತಂದೆಯ ಶವವನ್ನು ಸುಗಂಧದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ ಎಂದು ಅಪ್ಪಣೆಕೊಡಲು ಅವರು ಹಾಗೆಯೇ ಮಾಡಿದರು.


ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.


ಆ ಸ್ತ್ರೀಯರು ಸಬ್ಬತ್‍ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರವಿುಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗ ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು