Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:8 - ಕನ್ನಡ ಸತ್ಯವೇದವು J.V. (BSI)

8 ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:8
23 ತಿಳಿವುಗಳ ಹೋಲಿಕೆ  

ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.


ಆತನು ಅವರಿಗೆ - ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯದಲ್ಲಿ ಅನುಮಾನಗಳು ಹುಟ್ಟುವದೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ, ನಾನೇ ಅಲ್ಲವೇ.


ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.


ಆದರೆ ಅವರು ಹಾಗಂದುಕೊಳ್ಳುವದನ್ನು ಯೇಸು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? ಯಾವದು ಸುಲಭ?


ಯೇಸು ಅವರ ಆಲೋಚನೆಯನ್ನು ತಿಳಿದು - ನೀವು ಯಾಕೆ ನಿಮ್ಮ ಮನಸ್ಸಿನಲ್ಲಿ ಕೆಟ್ಟ ಆಲೋಚನೆಯನ್ನು ಮಾಡುತ್ತೀರಿ?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು;


ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ;


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.


ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಇವನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷವಿುಸಬಲ್ಲರು? ಎಂದು ತಮ್ಮ ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.


ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು