Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ದೆವ್ವಗಳು ಆತನನ್ನು ಕಂಡಾಗೆಲ್ಲಾ ಆತನ ಪಾದಕ್ಕೆ ಬಿದ್ದು - ನೀನು ದೇವಕುಮಾರನೆಂದು ಕೂಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಗಿರೊಲಾಗಲ್ಲಿ ಲೊಕಾಬಿ ಥೈ ಹೊತ್ತಿ. ತೆನಿ ಜೆಜುಕ್ ಬಗುನ್, ತೆಚ್ಯಾ ಇದ್ರಾಕ್ ಪಡುನ್ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:11
14 ತಿಳಿವುಗಳ ಹೋಲಿಕೆ  

ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.


ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು.


ನೀನು ದೇವರ ಮಗನಾಗಿದ್ದರೆ ಕೆಳಕ್ಕೆ ದುಮುಕು; ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.


ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.


ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾದ ಸುವಾರ್ತೆಯ ಪ್ರಾರಂಭವು.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು