Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:5 - ಕನ್ನಡ ಸತ್ಯವೇದವು J.V. (BSI)

5 ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ರಾಗಾನ್, ಜೆಜುನ್ ಸಗ್ಳ್ಯಾ ಲೊಕಾಕ್ನಿ ಎಗ್ದಾ ಅಪ್ನಾಚೆ ಡೊಳೆ ಫಿರ್ವುನ್ ಬಗಟ್ಲ್ಯಾನ್. ತೆಂಚೆ ಮಂಡ್‍ಪಾನ್ ಬಗುನ್ ತೆಕಾ ಬೆಜಾರ್ ಹೊಲೊ. ತನ್ನಾ ಜೆಜುನ್ ತ್ಯಾ “ಮಾನ್ಸಾಕ್ ತುಜೊ ಹಾತ್ ಲಾಂಬ್ ಸೊಡ್” ಮಟ್ಲ್ಯಾನ್. ತೆನಿ ಹಾತ್ ಲಾಂಬ್ ಸೊಡ್ಲ್ಯಾನ್, ತನ್ನಾಚ್ ತೆಚೊ ಹಾತ್ ಬರೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:5
29 ತಿಳಿವುಗಳ ಹೋಲಿಕೆ  

ಸುತ್ತಲೂ ಅವರೆಲ್ಲರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈ ವಾಸಿಯಾಯಿತು.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.


ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.


ಆತನು ಅವರನ್ನು ನೋಡಿ - ನೀವು ಹೋಗಿ ಯಾಜಕರಿಗೆ ಮೈ ತೋರಿಸಿಕೊಳ್ಳಿರಿ ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.


ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿ


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಕೋಪಿಸಿಕೊಂಡು - ಅವರು ಯಾವಾಗಲೂ ಹೃದಯದಲ್ಲಿ ತಪ್ಪಿಹೋಗುವವರು ಎಂದು ಹೇಳಿದೆನು. ಆದರೆ ಅವರು ನನ್ನ ಮಾರ್ಗವನ್ನು ತಿಳುಕೊಳ್ಳಲಿಲ್ಲ.


ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ತೆಗೆಯುವದೋ? ಎಂದು ಹೇಳಲು ಅವರು ಸುಮ್ಮನಿದ್ದರು.


ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು