Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:7 - ಕನ್ನಡ ಸತ್ಯವೇದವು J.V. (BSI)

7 ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಮಾನಾ, ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಗಾಲಿಲಿಯಾ ಸಮುಂದರಾಚ್ಯಾ ದಂಡೆಕ್ ಗೆಲೊ. ಥೈ ಲೊಕಾಂಚೊ ಎಕ್ ಮೊಟೊ ತಾಂಡೊ ಜೆಜುಚ್ಯಾ ಭೊತ್ಯಾನಿ ಗೊಳಾಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:7
20 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.


ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.


ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಫ್ತಾಲಿ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಗಲಿಲಾಯದ ಕೆದೆಷ್, ಹಮ್ಮೋತ್‍ದೋರ್, ಕರ್ತಾನ್ ಎಂಬ ಗೋಮಾಳಸಹಿತವಾದ ಮೂರು ಪಟ್ಟಣಗಳೂ ದೊರಕಿದವು.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.


ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು.


ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.


ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಆತನು ಮನೆಯೊಳಗೆ ಬಂದಾಗ ಜನರು ತಿರಿಗಿ ನೆರೆದದ್ದರಿಂದ ಊಟಕ್ಕೂ ಅವಕಾಶವಾಗಲಿಲ್ಲ.


ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು