Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:38 - ಕನ್ನಡ ಸತ್ಯವೇದವು J.V. (BSI)

38 ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ಜೆಜು, ಢೊನಿತ್, ಫಾಟಿಕ್ಡೆ ಉಶ್ಯಾ ವರ್‍ತಿ ಟಕ್ಲೆ ಥವ್ನ್ ಘೆವ್ನ್ ನಿಜಲ್ಲೊ. ಶಿಸಾನಿ ತೆಕಾ ಉಟ್ವುಲ್ಯಾನಿ, ಅನಿ “ಗುರುಜಿ, ಅಮಿ ಮರುನ್ ಗೆಲ್ಲ್ಯಾರ್‍ಬಿ, ತುಕಾ ಕಾಯ್ ಪರ್ವಾ ನಾ ಕಾಯ್?” ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:38
22 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ


ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.


ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡನು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಬೇರೆ ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ತೆರೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವದಕ್ಕೆ ಬಂದಿತ್ತು.


ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು