Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:6 - ಕನ್ನಡ ಸತ್ಯವೇದವು J.V. (BSI)

6 ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಲೊಕಾಕ್ನಿ ವಿಶ್ವಾಸ್ ನಸಲ್ಲೆ ಬಗುನ್ ಜೆಜು ಅಜಾಪ್ ಹೊಲೊ. ತನ್ನಾ ಜೆಜು ಅಜು-ಬಾಜುಚ್ಯಾ ಗಾಂವಾತ್ನಿ ಗೆಲೊ ಅನಿ ಸಿಕ್ವುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:6
12 ತಿಳಿವುಗಳ ಹೋಲಿಕೆ  

ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.


ಬಳಿಕ ಆತನು ಗಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು.


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ಅಲ್ಲಿಂದ ಆತನು ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರಿಗಿ ಗುಂಪು ಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರಿಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು