Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:14 - ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಯೇಸು ಜನರ ಗುಂಪನ್ನು ತಿರಿಗಿ ಹತ್ತಿರಕ್ಕೆ ಕರೆದು ಅವರಿಗೆ - ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಜನರನ್ನು ಮತ್ತೆ ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಪ್ರತಿಯೊಬ್ಬರು ಕೇಳಿರಿ ಮತ್ತು ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ಅನಿ ಎಗ್ದಾ ಸಗ್ಳ್ಯಾ ಲೊಕಾಕ್ನಿ ಅಪ್ನಾಕ್ಡೆ ಬಲ್ವುನ್.ಕಾಯ್ ಸಾಂಗ್ಲ್ಯಾನ್ ಮಟ್ಲ್ಯಾರ್ “ಮಿಯಾ ಸಾಂಗ್ತಲೆ ಆಯ್ಕಾ ಅನಿ ಕಳ್ವುನ್ ಘೆವಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:14
14 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ಜನರ ಗುಂಪನ್ನು ಹತ್ತರಕ್ಕೆ ಕರೆದು ಅವರಿಗೆ - ಕಿವಿಗೊಟ್ಟು ಕೇಳಿರಿ, ತಿಳುಕೊಳ್ಳಿರಿ.


ಫಿಲಿಪ್ಪನು ಓಡಿ ಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ - ಎಲೈ, ನೀನು ಓದುವದು ನಿನಗೆ ತಿಳಿಯುತ್ತದೋ? ಅನ್ನಲು


ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಹುಚ್ಚರೇ, ನಿಮಗೆ ಬುದ್ಧಿಬರುವದು ಯಾವಾಗ?


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು.


ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು.


ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇವಿುನವರಿಗೂ ಸಾರಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು