ಮಾರ್ಕ 7:22 - ಕನ್ನಡ ಸತ್ಯವೇದವು J.V. (BSI)22 ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ವ್ಯೆಭಿಚಾರ್ ಜಾಸ್ತಿಚಿ ಆಶ್ಯಾ, ಅಸಂ, ಝುಟೆ ಬೊಲ್ತಲೆ, ಬುರ್ಶೆಪಾನ್, ಕುಸ್ಡೆಪಾನ್, ಚಾಡ್ಗೆಪಾನ್, ಪಿಶೆಪಾನ್, ಅನಿ ಅಹಂಕಾರ್ ಹಿ ಸಗ್ಳಿ ಬುರ್ಶ್ಯಾ ಕಾಮಾ ಮಾನ್ಸಾಕ್ ಮ್ಹೆಳ್ಕೊ ಕರ್ತ್ಯಾತ್. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.