Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:17 - ಕನ್ನಡ ಸತ್ಯವೇದವು J.V. (BSI)

17 ಆತನು ಅದನ್ನು ತಿಳಿದು - ರೊಟ್ಟಿಯಿಲ್ಲವಲ್ಲಾ ಎಂದು ಮಾತಾಡಿಕೊಳ್ಳುವದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ತಿಳುವಳಿಕೆ ಬರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ಬೊಲ್ತಲೆ ಜೆಜುಕ್ ಕಳ್ಳೆ ತನ್ನಾ ಜೆಜುನ್ “ತುಮಿ ಭಾಕ್ರಿಯಾನಾತ್ ಮನುನ್ ಕಶ್ಯಾಕ್ ಬೊಲುಲ್ಯಾಸಿ? ಅಜುನ್ ತುಮ್ಕಾ ಕಳುಕ್ ನಾ? ತುಮ್ಚಿ ಟಕ್ಲಿ ತೌಡಿಬಿ ಮಡ್ಡ್ ಹೊಲ್ಯಾತ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:17
17 ತಿಳಿವುಗಳ ಹೋಲಿಕೆ  

ಯಾಕಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಲಿಲ್ಲ; ಅವರ ಮನಸ್ಸು ಕಲ್ಲಾಗಿತ್ತು.


ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಬಾಯೊಳಕ್ಕೆ ಹೋಗುವಂಥದು ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.


ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಅವರು - ನಮ್ಮಲ್ಲಿ ರೊಟ್ಟಿಯಿಲ್ಲವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು