Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:31 - ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ "ಮಾನ್ಸಾಚ್ಯಾ ಲೆಕಾಕ್ ಕಸ್ಟ್ ಸೊಸುಕುಚ್ ಪಾಜೆ, ಜಾನ್ತ್ಯಾ ಲೊಕಾನಿ, ಮೊಟ್ಯಾ ಯಾಜಕಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ತೆಕಾ ತಿರಸ್ಕಾರ್ ಕರುಕುಚ್ ಪಾಜೆ. ಅನಿ ತೊ ಮರುಕ್ ಪಾಜೆ, ಖರೆ, ತೊ ತಿನ್ವ್ಯಾ ದಿಸಿ ಮರಲ್ಲ್ಯಾತ್ನಾ ಝಿತ್ತೊ ಹೊವ್ನ್ ಉಟುನ್ ಯೆತಾ."ಮನುನ್ ಸಾಂಗುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:31
27 ತಿಳಿವುಗಳ ಹೋಲಿಕೆ  

ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ಯೇಸು - ಈ ದೇವಾಲಯವನ್ನು ಕೆಡವಿರಿ; ನಾನು ಮೂರು ದಿನದಲ್ಲಿ ಅದನ್ನು ಎಬ್ಬಿಸುವೆನು ಅಂದನು.


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ನಿರಾಕರಿಸಲ್ಪಡಬೇಕು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.


ನನ್ನನ್ನು ಲಕ್ಷ್ಯಮಾಡದೆ ನನ್ನ ಮಾತುಗಳನ್ನು ಅಂಗೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದು ಒಂದು ಇದೆ, ಅದು ಯಾವದಂದರೆ, ನಾನು ಆಡಿದ ಮಾತು; ಅದೇ ಅವನಿಗೆ ಕಡೇ ದಿನದಲ್ಲಿ ತೀರ್ಪುಮಾಡುವದು.


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು