Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:20 - ಕನ್ನಡ ಸತ್ಯವೇದವು J.V. (BSI)

20 ಅವನನ್ನು ಆತನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಅವನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ತೆನಿ ತ್ಯಾ ಪೊರಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ. ಜೆಜುಕ್ ಬಗಟಲ್ಲೆಚ್ ತ್ಯಾ ಗಿರ್‍ಯಾನ್ ತೆಕಾ ಕಡ್ಕಡಿ ಸರ್ಕೆ ಕರ್‍ಲ್ಯಾನ್ , ತ್ಯಾ ಪೊರಾಕ್ ಜಿಮ್ನಿಕ್ ಪಾಡ್ವುಲ್ಯಾನ್ ತನ್ನಾ ತೊ ಪೊರ್ ಖಾಲ್ತಿ ಪಡುನ್ ತೊಂಡಾತ್ನಾ ಫೆನ್ ಕಾಡುನ್ಗೆತ್ ತಳ್ಮಳುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:20
14 ತಿಳಿವುಗಳ ಹೋಲಿಕೆ  

ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು.


ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟುಹೋಗು ಎನ್ನಲಾಗಿ ಆ ದೆವ್ವವು ಅವನನ್ನು ನಡುವೆ ಕೆಡವಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.


ಯಾಕಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಕಟ್ಟಿದ್ದರೂ ಅವನು ಆ ಬಂಧಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವ ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.


ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.


ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು.


ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು


ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;


ಬಾಯಲ್ಲಿ ನೊರೆ ಬರುವಷ್ಟು ಅವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ಜಜ್ಜಿದ ಹೊರತು ಬಿಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು