Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:32 - ಕನ್ನಡ ಸತ್ಯವೇದವು J.V. (BSI)

32 ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಶಿಸಾಕ್ನಿ ತೆಚ್ಯಾ ಗೊಸ್ಟಿಯಾ ಅರ್‍ತುಚ್ ಹೊವ್ಕ್‌ನ್ಯಾತ್, ಜಾಲ್ಯಾರ್‍ಬಿ ಜೆಜುಕ್ ಹ್ಯಾ ಗೊಸ್ಟಿಯಾಂಚೊ ಅರ್ತ್‍ ಕಾಯ್ ಮನುನ್ ಇಚಾರುಕ್ ತೆಂಕಾ ಧೈರೊ ಹೊವ್ಕ್‌ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:32
12 ತಿಳಿವುಗಳ ಹೋಲಿಕೆ  

ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.


ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.


ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.


ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?


ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.


ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಒಬ್ಬ ಹೆಂಗಸಿನ ಸಂಗಡ ಮಾತಾಡುತ್ತಿರುವದನ್ನು ಕಂಡು ಆಶ್ಚರ್ಯಪಟ್ಟರು. ಆದರೂ - ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತಾಡುತ್ತೀ? ಎಂದು ಒಬ್ಬರೂ ಕೇಳಲಿಲ್ಲ.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಆತನು ಹಿಂತಿರುಗಿಕೊಂಡು ತನ್ನ ಶಿಷ್ಯರನ್ನು ನೋಡಿ ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಗದರಿಸಿ ಹೇಳಿದನು.


ಆತನು ಅವರಿಗೆ - ನಿಮಗೂ ಅಷ್ಟು ಬುದ್ಧಿ ಇಲ್ಲವೇ? ಹೊರಗಿನಿಂದ ಮನುಷ್ಯನೊಳಕ್ಕೆ ಹೋಗುವಂಥದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು