Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:7 - ಕನ್ನಡ ಸತ್ಯವೇದವು J.V. (BSI)

7 ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಎಕ್ ಮೊಡ್ ಯೆಲೆ ಅನಿ ತೆಚ್ಯಾ ಸಾವ್ಳಿನ್ ತೆಂಕಾ ಧಾಪ್ಲಿನ್, ಅನಿ ಮೊಡಾತ್ನಾ “ಹ್ಯೊ, ಮಾಜೊ ಲೈ ಅಪುರ್‍ಬಾಯೆಚೊ ಲೆಕ್, ತೆನಿ ಸಾಂಗಟಲ್ಲೆ ಆಯ್ಕಾ!” ಮನುನ್ ಧನ್ ಅಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:7
41 ತಿಳಿವುಗಳ ಹೋಲಿಕೆ  

ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.


ನಾನು ಅದನ್ನು ನೋಡಿ ಈತನೇ ದೇವಕುಮಾರನೆಂದು ಸಾಕ್ಷಿಕೊಟ್ಟಿದ್ದೇನೆ ಅಂದನು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.


ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.


ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.


ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು - ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ ಎಂದು ಕೇಳಿದನು.


ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಧ್ವನಿಯನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ,


ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.


ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.


ಏನು ಹೇಳಬೇಕೋ ತಿಳಿಯದೆ ಹೀಗೆ ಮಾತಾಡಿದನು. ಅವರು ಬಹಳವಾಗಿ ಹೆದರಿಕೊಂಡಿದ್ದರು.


ಫಕ್ಕನೆ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಆಗಿನಿಂದ ಮತ್ತಾರನ್ನೂ ಕಾಣಲಿಲ್ಲ.


ಮತ್ತು ಪವಿತ್ರಾತ್ಮನು ದೇಹಾಕಾರವಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು