Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:2 - ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:2
33 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.


ನನ್ನ ಆತ್ಮವು ನನ್ನಲ್ಲಿ ಕುಂದಿದಾಗ ಯೆಹೋವನಾದ ನಿನ್ನನ್ನು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ನಿನ್ನ ಪರಿಶುದ್ಧಾಲಯಕ್ಕೆ ಸೇರಿತು.


ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವದಿಲ್ಲ; ಲೋಕವೂ ಅದರಲ್ಲಿರುವದೆಲ್ಲವೂ ನನ್ನದಲ್ಲವೇ.


ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.


ನೀನು ವಾಸಿಸುವ ಮಹಾಪರಿಶುದ್ಧ ಸ್ಥಾನದ ಕಡೆಗೆ ನಾನು ಕೈಯೆತ್ತಿಕೊಂಡು ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.


ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.


ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು.


ಅವರು ಅವನಿಗೆ - ಹಾಗೆಯೇ ಮಾಡುವೆವು; ಉಭಯತರ ಮಾತುಗಳಿಗೆ ಯೆಹೋವನೇ ಸಾಕ್ಷಿ ಎಂದು ಉತ್ತರಕೊಟ್ಟರು.


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!


ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ದನಿಗೈಯುತ್ತೇನೆ.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು