Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:11 - ಕನ್ನಡ ಸತ್ಯವೇದವು J.V. (BSI)

11 ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:11
35 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!


ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು