Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:1 - ಕನ್ನಡ ಸತ್ಯವೇದವು J.V. (BSI)

1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:1
53 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -


ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂತು. ತೆಂಕಲಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡವು ಕಾಣಿಸಿತು.


ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತನಗರದಲ್ಲಿ ಸರ್ವಸ್ತುತಿಪಾತ್ರನಾಗಿದ್ದಾನೆ.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು