Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:4 - ಕನ್ನಡ ಸತ್ಯವೇದವು J.V. (BSI)

4 ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:4
25 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.


ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ, ಮತ್ತು ನಾನು ನಿಮ್ಮನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ನಿಮ್ಮ ಪಿತೃವಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.


ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವದಿಲ್ಲ. ಅನೇಕರು ನಿನ್ನ ಮುಖಪ್ರಸನ್ನತೆಯನ್ನು ಅಪೇಕ್ಷಿಸುವರು.


ಗುಡ್ಡದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ ಮಂದೆಗಳಿಗೆ ಆಸರೆಯಾಗುವವು; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ನಾನು ಅವುಗಳ ಮೇಲೆ ಕುರುಬರನ್ನು ನೇವಿುಸುವೆನು, ಅವರು ಅವುಗಳನ್ನು ಮೇಯಿಸುವರು; ಅವು ಇನ್ನು ಭಯಪಡವು, ಬೆದರವು, ಅವುಗಳಲ್ಲಿ ಒಂದೂ ಕಡಿಮೆಯಾಗದು; ಇದು ಯೆಹೋವನ ನುಡಿ.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು