Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:14 - ಕನ್ನಡ ಸತ್ಯವೇದವು J.V. (BSI)

14 ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:14
15 ತಿಳಿವುಗಳ ಹೋಲಿಕೆ  

ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು [ತಿಂದರೂ] ಹಸಿದೇ ಇರುತ್ತಾರೆ; ಎಡಗಡೆಯಲ್ಲಿರುವದನ್ನು ಉಂಡರೂ ತೃಪ್ತಿಗೊಳ್ಳರು; ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು