ಮೀಕ 6:9 - ಕನ್ನಡ ಸತ್ಯವೇದವು J.V. (BSI)9 ಯೆಹೋವನು ದನಿಗೈದು ಪಟ್ಟಣದ ಕಡೆಗೆ ಕೂಗುತ್ತಾನೆ; (ನಿನ್ನ ನಾಮದಲ್ಲಿ ಭಯಭಕ್ತಿಯಿಡುವದು ಸುಜ್ಞಾನವೇ;) [ಬೀಸುವ] ದಂಡಕ್ಕೆ ಕಿವಿಗೊಡಿರಿ, ಅದನ್ನು ನೇವಿುಸಿದವನು ಯಾವನೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ. ಅಧ್ಯಾಯವನ್ನು ನೋಡಿ |