Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:19 - ಕನ್ನಡ ಸತ್ಯವೇದವು J.V. (BSI)

19 ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:19
36 ತಿಳಿವುಗಳ ಹೋಲಿಕೆ  

ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ಆತನೇ ಇಸ್ರಾಯೇಲನ್ನು ಅದರ ಸಕಲಪಾಪಗಳಿಂದ ವಿಮೋಚಿಸುವನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ.


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಬಾಳುವನು.


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದೀ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದೀ.


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು