Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:8 - ಕನ್ನಡ ಸತ್ಯವೇದವು J.V. (BSI)

8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:8
46 ತಿಳಿವುಗಳ ಹೋಲಿಕೆ  

ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.


ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗುವರಲ್ಲಾ ಅಂದುಕೊಂಡೆನು.


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?


ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ;


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ಮತ್ತು ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಇಂತೆನ್ನುತ್ತಾನೆ - ಬಿದ್ದವರು ಏಳದಿರುವರೋ? ಬಿಟ್ಟು ಹೋದವನು ತಿರಿಗಿ ಬರುವದಿಲ್ಲವೋ?


ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.


ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋವಿುನವರೆಲ್ಲರನ್ನೂ ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದಿಂದುರಿಯುತ್ತಾ ಶಪಿಸೇ ಶಪಿಸಿದ್ದೇನೆ;


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು