Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಲೊಕಾಕ್ನಿ ಸುಟ್ಕಾ ಕರ್ತಲ್ಯಾ ದೆವಾಚೊ ಪುರಾ ನಿಯಮ್ ಉಶ್ಯಾರ್ಕಿನ್ ಶಿಕ್ತಲೊ ಮಾನುಸ್ ಖರೆಚ್‍ಬಿ ಖುಶಿನ್ ಭರುನ್ ರ್‍ಹಾತಾ. ತೊ ತೆ ಶಿಕುನ್ಗೆತ್ ರ್‍ಹಾತಾ ತೊ ದೆವಾಚಿ ಗೊಸ್ಟಿಯಾ ಆಯಿಕ್ತಾ ಅನಿ ಅಪ್ನಿ ಆಯ್ಕಲ್ಲೆ ಇಸ್ರಿನಾ. ತೊ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ ತಸೆ ಹೊವ್ನ್ ತೊ ಕುಶಿನ್ ಭರಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:25
41 ತಿಳಿವುಗಳ ಹೋಲಿಕೆ  

ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಆದರೂ ಸ್ತ್ರೀಯರು ಮಾನಸ್ಥೆಯರಾಗಿ ನಂಬಿಕೆಯಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವದರಲ್ಲಿ ರಕ್ಷಣೆಹೊಂದುವರು.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ ಬೋಧನೆಯು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು