Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:9 - ಕನ್ನಡ ಸತ್ಯವೇದವು J.V. (BSI)

9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉತ್ತಮಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಗರಿಬ್ ಪಾನಾತ್ ಲೈ ಕಿಳ್ ಪಾನಾತ್ ಹೊತ್ತೊ ಭಾವ್ ಅಪ್ನಿ ಬರ್‍ಯಾ ಸ್ಥಿತಿ ಯೆಲೊ ಮನುನ್ ಖುಶಿ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:9
25 ತಿಳಿವುಗಳ ಹೋಲಿಕೆ  

ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.


ಪ್ರಭುಗಳನ್ನು ಸಿಂಹಾಸನಗಳಿಂದ ದೊಬ್ಬಿ ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯ ಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು