Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:1 - ಕನ್ನಡ ಸತ್ಯವೇದವು J.V. (BSI)

1 ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಹಿಮೆನ್ ಭರಲ್ಲ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವರ್ತಿ ತುಮಿ ವಿಶ್ವಾಸ್ ಥವಲ್ಲ್ಯಾನು, ತುಮ್ಚ್ಯಾ ಮದ್ದಿ ಪಕ್ಷಪಾತ್ ರ್‍ಹಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:1
29 ತಿಳಿವುಗಳ ಹೋಲಿಕೆ  

ಇವು ಕೂಡ ಜ್ಞಾನಿಗಳ ಉಕ್ತಿಗಳೇ: - ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ಪಕ್ಷಪಾತವು ಅಧರ್ಮ; ತುತ್ತನ್ನಕ್ಕಾಗಿ ಜನರು ದ್ರೋಹಮಾಡುವದುಂಟು.


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ನೀವು ಶೋಭಾಯಮಾನವಾದ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಮರ್ಯಾದೆಯಿಂದ ನೋಡಿ ಅವನಿಗೆ - ನೀವು ಇಲ್ಲಿ ಈ ಸುಖಾಸನದ ಮೇಲೆ ಕೂತುಕೊಳ್ಳಿರಿ ಎಂತಲೂ ಆ ಬಡಮನುಷ್ಯನಿಗೆ - ನೀನು ಅಲ್ಲಿ ನಿಂತುಕೋ, ಇಲ್ಲವೆ ನನ್ನ ಕಾಲ್ಮಣೆಯ ಹತ್ತಿರ ನೆಲದ ಮೇಲೆ ಕೂತುಕೋ ಎಂತಲೂ ಹೇಳಿದರೆ


ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.


ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನನ್ನ ಮುಖಾಂತರವಾಗಿ ನಿಮಗೆ ಪಾರಮಾರ್ಥಿಕ ವರವೇನಾದರೂ ದೊರಕಿ ನೀವು ದೃಢವಾಗುವದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ನೀವು ನನ್ನ ನಂಬಿಕೆಯಿಂದ ಸಹಾಯಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ಸ್ವಂತ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ -


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು