Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:21 - ಕನ್ನಡ ಸತ್ಯವೇದವು J.V. (BSI)

21 ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಮ್ಚ್ಯಾ ವಾಡ್ ವಡ್ಲಾ ಅಬ್ರಾಹಾಮಾನ್ ಅಪ್ನಾಚ್ಯಾ ಲೆಕಾಕ್ ಇಸಾಕಾಕ್ ಅಲ್ತಾರಿ ವರ್ತಿ ಭೆಟ್ವುತಾನಾ, ತ್ಯಾ ತೆಚ್ಯಾ ಕಾಮಾಕ್ ಲಾಗುನ್ ತೊ ನಿತಿವಂತ್ ಮನುನ್ ಹೊಲೆ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:21
21 ತಿಳಿವುಗಳ ಹೋಲಿಕೆ  

ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.


ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು.


ಮನುಷ್ಯನು ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೇ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೋಡುತ್ತೀರಿ.


ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ.


ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಏನು ಪಡಕೊಂಡನೆಂದು ಹೇಳಬೇಕು?


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು


ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿಸಿ ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು