Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:25 - ಕನ್ನಡ ಸತ್ಯವೇದವು J.V. (BSI)

25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಚ್ ವೆಭಿಚಾರ್ ಕರ್ತಲ್ಯಾ ರಾಹಾಬ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತಿಚ್ಯಾ ಕಾಮಾಂಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಹೊಲೆ ನ್ಹಯ್? ತಿನಿ ಖಬರ್ ದಿತಲ್ಯಾಕ್ನಿ ಸ್ವಾಗತ್ ಕರ್ಲಿನ್ ಅನಿ ಎಕ್ ದುಸ್ರ್ಯಾಚ್ ವಾಟೆನ್ ತೆಂಕಾ ಧಾಡುನ್ ದಿಲಿನ್, ಅಶೆ ತಿಚ್ಯಾ ಹ್ಯಾ ಕಾಮಾಂಚ್ಯಾ ವೈನಾ ತಿಕಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊಲೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:25
15 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.


ಅವಳ ಮನೆಯು ಊರುಗೋಡೆಯ ಮೇಲಿದ್ದದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ - ನೀವು ಹಿಂದಟ್ಟುವವರಿಗೆ ಸಿಕ್ಕದಂತೆ


ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳ ಬಂದವರಿಗೆ - ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬದು ನನಗೆ ಗೊತ್ತಿದ್ದಿಲ್ಲ.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸಲ್ಮೋನನು ರಾಹಾಬಳಲ್ಲಿ ಬೋವಜನನ್ನು ಪಡೆದನು. ಬೋವಜನು ರೂತಳಲ್ಲಿ ಓಬೇದನನ್ನು ಪಡೆದನು. ಓಬೇದನು ಇಷಯನನ್ನು ಪಡೆದನು.


ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ.


ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ.


ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ ಅಲ್ಲಿ ಸಾಲಾಗಿ ಇಟ್ಟಿದ್ದ ಪುಂಡಿಯ ಹೊರೆಗಳಲ್ಲಿ ಅಡಗಿಸಿಟ್ಟಿದ್ದಳು.


ಆ ಪರ್ವತಕ್ಕೆ ಓಡಿಹೋಗಿ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ ಅಂದಳು.


ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.


ಮನುಷ್ಯನು ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೇ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೋಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು