Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:6 - ಕನ್ನಡ ಸತ್ಯವೇದವು J.V. (BSI)

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ತುಮಿ ತ್ಯಾ ಗರಿಬಾಕ್ನಿ ಮಾನ್ ದಿಲ್ಲ್ಯಾಸಿ ನಾ ಸಾವ್ಕಾರ್ ಲೊಕಾ ತುಮ್ಕಾ ತುಡ್ವುತಾತ್ ಅನಿ ವೊಡುನ್ ಚವ್ಕಸಿ ಕರ್ತಲ್ಯಾ ಜಾಗ್ಯಾಕ್ ನ್ಹೆತಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:6
38 ತಿಳಿವುಗಳ ಹೋಲಿಕೆ  

ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ನೀವು ಶೋಭಾಯಮಾನವಾದ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಮರ್ಯಾದೆಯಿಂದ ನೋಡಿ ಅವನಿಗೆ - ನೀವು ಇಲ್ಲಿ ಈ ಸುಖಾಸನದ ಮೇಲೆ ಕೂತುಕೊಳ್ಳಿರಿ ಎಂತಲೂ ಆ ಬಡಮನುಷ್ಯನಿಗೆ - ನೀನು ಅಲ್ಲಿ ನಿಂತುಕೋ, ಇಲ್ಲವೆ ನನ್ನ ಕಾಲ್ಮಣೆಯ ಹತ್ತಿರ ನೆಲದ ಮೇಲೆ ಕೂತುಕೋ ಎಂತಲೂ ಹೇಳಿದರೆ


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಕೊಂಡು ಹೋಗಿ - ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ,


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಒಬ್ಬರಿಗೊಬ್ಬರು ಪ್ರೀತಿ ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರ, ಇವರಾರಿಗೂ ಅನ್ಯಾಯ ಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ,


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ.


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


[ಕುಗ್ಗಿದವನು] ಜಜ್ಜಲ್ಪಟ್ಟನು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದುಹೋಗುತ್ತಾನೆ.


ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವದಕ್ಕೆ ಸಮಯ ನೋಡುತ್ತಾನೆ.


ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ಯೇಸು - ನಾನು ದೆವ್ವಹಿಡಿದವನಲ್ಲ, ನನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದೇನೆ; ಆದರೂ ನೀವು ನನ್ನನ್ನು ಅವಮಾನಪಡಿಸುತ್ತೀರಿ.


ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು