Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:8 - ಕನ್ನಡ ಸತ್ಯವೇದವು J.V. (BSI)

8 ಆದರೂ ಶಾಸ್ತ್ರಕ್ಕೆ ಸರಿಯಾಗಿ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬ ರಾಜಾಜ್ಞೆಯನ್ನು ನೀವು ನೆರವೇರಿಸುತ್ತಿದ್ದರೆ ನೀವು ಒಳ್ಳೇದನ್ನು ಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ತುಜೊಚ್ ಪ್ರೆಮ್ ಕರಲ್ಲ್ಯಾ ಸಾರ್ಕೆ, ಸೆಜಾರ್‍ಯಾಚೊಬಿ ಪ್ರೆಮ್ ಕರ್. ಮನ್ತಲ್ಯಾ ಪವಿತ್ರ್ ಪುಸ್ತಕಾತ್ಲ್ಯಾ ಹುಕುಮಾ ಸಾರ್ಕೆ ಖಾಲ್ತಿ ಹೊವ್ನ್ ಚಲುಕ್ ಲಾಗ್ಲ್ಯಾಶಿ ಜಾಲ್ಯಾರ್, ತುಮಿ ಸಮಾ ಹೊತ್ತೆಚ್ ಕರುಕ್‍ ಲಾಗ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:8
23 ತಿಳಿವುಗಳ ಹೋಲಿಕೆ  

ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.


ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ.


ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ಅದಕ್ಕೆ ಯೆಹೋವನು - ನೀನು ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಿದನು.


ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು


ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.


ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರರಾಗಿದ್ದದ್ದು ಒಳ್ಳೇದಾಯಿತು.


ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.


ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.


ಆತನು ಅವನಿಗೆ - ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು