Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:14 - ಕನ್ನಡ ಸತ್ಯವೇದವು J.V. (BSI)

14 ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತುಮ್ಚ್ಯಾ ಮನಾತ್ನಿ ತುಮಿ ಬುರ್ಶಿ ಇರ್ಸ್ಯಾ, ಕುಸ್ಡೆಪಾನ್, ಸ್ವಾರ್ಥ್ ರಾಲ್ಯಾರ್, ತುಮ್ಚ್ಯಾ ಬುದ್ವಂತ್ಕಿಚ್ಯಾ ಮೊಟೆ ಪಾನಾಚ್ಯಾ ವಿಶಯಾತ್ ಬೊಲುನ್ ಖರ್ಯಾಚ್ಯಾ ವಿಶಯಾತ್ ಪಾಪ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:14
42 ತಿಳಿವುಗಳ ಹೋಲಿಕೆ  

ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ನನ್ನ ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯಮಾರ್ಗವನ್ನು ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ -


ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.


ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.


ಕೋಪವು ಕ್ರೂರ, ಕ್ರೋಧವು ಪ್ರವಾಹ; ಮಾತ್ಸರ್ಯಕ್ಕೆ ಎದುರಾಗಿ ಯಾರು ನಿಂತಾರು?


ಶಾಂತಿಗುಣವು ದೇಹಕ್ಕೆ ಜೀವಾಧಾರವು; ಕ್ರೋಧವು ಎಲುಬಿಗೆ ಕ್ಷಯವು.


ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಿಲ್ಲ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ಹರಕೊಂಡು ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ನೋಡಿರಿ.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ನೀನು ಯೆಹೂದ್ಯನೆನಿಸಿಕೊಂಡವನೂ ಧರ್ಮಶಾಸ್ತ್ರದಲ್ಲಿ ಭರವಸವಿಟ್ಟವನೂ ದೇವರ ವಿಷಯವಾಗಿ ಹೊಗಳಿಕೊಳ್ಳುವವನೂ


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.


ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು; ಆದರೆ ಅವನ ತಂದೆಯು ಅವನ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡನು.


ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.


ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.


ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು