Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:2 - ಕನ್ನಡ ಸತ್ಯವೇದವು J.V. (BSI)

2 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ದೆವಾಕ್ಡೆ ಲೈ ಮಾಗ್ತ್ಯಾಸಿ ತೆ ತುಮ್ಕಾ ಗಾವಿನಾ, ತಸೆ ಹೊವ್ನ್ ತುಮಿ ಜಿವ್ ಕಾಡುಕ್ ಸೈತ್ ತಯಾರ್ ಹೊತ್ಯಾಶಿ. ಲೈ ಆಶಾ ಕರ್ತ್ಯಾಸಿ ಖರೆ ತೆ ತುಮ್ಕಾ ಗಾವಿನಾ ತಸೆ ಹೊವ್ನ್ ತುಮಿ ಝಗ್ಡೆ ಅನಿ ಮಾರಾ ಮಾರಿ ಕರ್ತ್ಯಾಸಿ ತುಮ್ಕಾ ಹೆ ಸಗ್ಳೆ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆ ಸಗ್ಳೆ ದೆವಾಕ್ಡೆ ಮಾಗಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:2
14 ತಿಳಿವುಗಳ ಹೋಲಿಕೆ  

ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಆಗ ಆಹಾಜನು, ನಾನು ಕೇಳಿಕೊಳ್ಳುವದೇ ಇಲ್ಲ. ಯೆಹೋವನನ್ನು ಪರೀಕ್ಷಿಸುವದಿಲ್ಲ ಅಂದನು.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.


ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ, ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.


ನಾನು ಇಜ್ರೇಲಿನವನಾದ ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂಬದಾಗಿ ಹೇಳಿದೆನು; ಆದರೆ ಅವನು ಕೊಡುವದಿಲ್ಲ ಅಂದನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು